ಕುಂದಾಪುರ: ಕೋಟೇಶ್ವರ ಗ್ರಾಮದ ಪೆಟ್ರೋಲ್ ಬಂಕ್ ಬಳಿ ಮಟ್ಕಾ ಜುಗಾರಿ ಆಟಕ್ಕೆ ಹಣ ಸಂಗ್ರಹಣ ಮಾಡುತ್ತಿದ್ದ ಕಾವ್ರಾಡಿ ಗ್ರಾಮದ ವಾಲೂ¤ರು ಸಂಪತ್ ಶೆಟ್ಟಿಯನ್ನು ಕುಂದಾಪುರ ಎಸ್.ಐ. ಜಯರಾಮ ಗೌಡ ಬಂಧಿಸಿದ್ದಾರೆ. ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ಹಾಗೂ ಪರಿಕರಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.