ಕೋಟ: ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಕಸಾಯಿಖಾನೆಗೆ ಸಾಗಾಟ ನಡೆಸಲು ಪ್ರಯತ್ನಿಸುತ್ತಿದ್ದ ಸಂದರ್ಭ, ಸಾರ್ವಜನಿಕರು ಹಾಗೂ ಹಿಂದೂ ಸಂಘಟನೆಯ ಸದಸ್ಯರು ಮಧ್ಯ ಪ್ರವೇಶಿಸಿ ಜಾನುವಾರುಗಳನ್ನು ರಕ್ಷಣೆ ನಡೆಸಿದ ಘಟನೆ ಆ.7ರಂದು ಅಪರಾಹ್ನ ಕೋಟದಲ್ಲಿ ನಡೆದಿದೆ.
ಕೋಟದ ಮಣೂರು ಸಮೀಪ ಮೂರು ಗಂಡು ಕರುಗಳನ್ನು ಕಾಲು ಹಾಗೂ ಬಾಯಿಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ಸಾಗಟಕ್ಕೆ ಪ್ರಯತ್ನಿಸುತ್ತಿದ್ದ ವೇಳೆ. ಕೋಟದ ಹಿಂದೂ ಜಾಗರಣಾ ವೇದಿಕೆ ಸದಸ್ಯರು, ಸಾರ್ವಜನಿಕರೊಂದಿಗೆ ಸ್ಥಳಕ್ಕೆ ತೆರಳಿದ್ದು, ಆರೋಪಿಗಳು ಜಾನುವಾರುಗಳನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಅನಂತರ ಜಾನುವಾರುಗಳನ್ನು ಸುರಕ್ಷಿತವಾಗಿ ಕೋಟೇಶ್ವರ ಸಮೀಪದ ಗೋಶಾಲೆಗೆ ಹಸ್ತಾಂತರಿಸಲಾಯಿತು.